Sunday 18 July 2021

ಕಾಳುಮೆಣಸಿಗೆ ಜೈವಿಕ ಗೊಬ್ಬರ

 ಬರಹ: ಕೂಡಂಡ ರವಿ, ಹೊದ್ದೂರು. 



 

 

 

 
ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹ ಎಂಬ ಜೈವಿಕ ಗೊಬ್ಬರವನ್ನು ಕಾಳು ಮೆಣಸು ಬೆಳೆಯ ಇಳುವರಿ ಹೆಚ್ಚಿಸಲು ಸಹಕಾರಿ. ಜೊತೆಗೆ ಆದ್ದರಿಂದ ಜಿಲ್ಲೆಯ ರೈತರು ಈ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಕಾಳುಮೆಣಸಿನಲ್ಲಿ ಬಳಸಿ. ಇಳುವರಿಯನ್ನು ಹೆಚ್ಚಿಸಬಹುದಾಗಿದೆ. ಶೀಘ್ರ ಸೊರಗು ಮತ್ತು ಹಳದಿ ರೋಗವನ್ನು ಹತೋಟಿ ಮಾಡಲು ಶಿ¥s಼Áರಸ್ಸು ಮಾಡಬಹುದೆಂದು ಕೃಷಿ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.
ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಕಾಳುಮೆಣಸಿಗೆ ಬಳಸುವುದರಿಂದ ಬಳ್ಳಿಗಳು ಹೊಸದಾಗಿ ಚಿಗುರು ಬರಲು, ಶೀಘ್ರ ಸೊರಗು ರೋಗವನ್ನು ಹತೋಟಿ ಮಾಡಲು, ಗೊಂಚಲು ಅಕಾಲಿಕವಾಗಿ ಬೀಳುವ ಸಮಸ್ಯೆಯನ್ನು ಕಡಿಮೆ ಮಾಡಲು ಮತ್ತು ಉತ್ತಮವಾಗಿ ಬೇರು ಬರಲು ಸಹಾಯವಾಗುತ್ತದೆ.
ಕಡಿಮೆ ಖರ್ಚು
ಜೈವಿಕ ಗೊಬ್ಬರಗಳು ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಗುಣ ವಿಶೇಷತೆಯಿಂದ ಪ್ರಾಮುಖ್ಯತೆಯನ್ನು ಪಡೆದಿರುತ್ತವೆೆ. ಪ್ರಸ್ತುತ ಜೈವಿಕ ಗೊಬ್ಬರಗಳ ಬಳಕೆ ಬಗ್ಗೆ ಸರಿಯಾದ ಮಾಹಿತಿಯಿಲ್ಲದಿರುವುದರಿಂದ, ಜೈವಿಕ ಸಂಪನ್ಮೂಲಗಳ ಮತ್ತು ತಂತ್ರಜ್ಞಾನದ ಕೊರತೆಯಿಂದಾಗಿ ಜೈವಿಕ ಗೊಬ್ಬರಗಳ ಬಳಕೆ ಕಡಿಮೆಯಾಗಿದೆ. ಈ ಕೊರತೆಯನ್ನು ನೀಗಿಸಲು ಮತ್ತು ಒಂದೇ ರೀತಿಯ ಜೈವಿಕ ಗೊಬ್ಬರಗಳ ಬಳಕೆಯಿಂದ ಉಂಟಾಗುವ ಅಧಿಕ ಖರ್ಚು ಮತ್ತು ಕಡಿಮೆ ಕಾರ್ಯಕ್ಷಮತೆಯ ನ್ಯೂನತೆಯನ್ನು ಹೋಗಲಾಡಿಸಲು ಉದ್ದೇಶಿಸಿದೆ.

 ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಜೈವಿಕ ಗೊಬ್ಬರವಾದ ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಉತ್ಕöÈಷ್ಟ ತಂತ್ರಜ್ಞಾನದೊAದಿಗೆ ಅಭಿವೃದ್ಧಿಪಡಿಸಿದೆ. ಅರ್ಕಾ ಸೂಕ್ಷಾ÷್ಮಣು ಜೀವಿಗಳ ಗೊಬ್ಬರವು ಗೋಣಿಕೊಪ್ಪಲುವಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಲಭ್ಯವಿದೆ. ಕೃಷಿ ವಿಜ್ಞಾನ ಕೇಂದ್ರದಲ್ಲಿ ದೊರೆಯುವ ಈ ಗೊಬ್ಬರವನ್ನು ಸಸ್ಯ ಸಂರಕ್ಷಣಾ ತಜ್ಞ ಡಾ.ವೀರೇಂದ್ರ ಕುಮಾರ್ ರೈತರಲ್ಲಿ ಮನವಿಯನ್ನು ಮಾಡಿದ್ದಾರೆ.

ಸೂಕ್ಷಾ÷್ಮಣು ಜೀವಿಗಳ ಉಪಯೋಗಗಳು
ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ (ಅಜಟೋಬ್ಯಾಕ್ಟರ್ ಟ್ರೋಪಿಕಾಲಸ್, ಬೆಸಿಲ್ಲಸ್ ಆರ್ಯಭಟ ಮತ್ತು ಸುಡೋಮೋನಾಸ್ ಥಾಯ್ವಾನೆನ್ಸಿಸ್) ಕಾರ್ಯಕ್ಷಮತೆಯನ್ನು ಹೊಂದಿರುತ್ತದೆ.
ಈ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಬಳಸುವುದರಿಂದ ಕಾಳುಮೆಣಸಿನ ಗಿಡ ಹಳದಿಯಾಗುವುದನ್ನು ತಡೆಗಟ್ಟುತ್ತದೆ. ಬೇರಿನ ಬೆಳವಣಿಗೆ ಉತ್ತಮವಾಗಿದ್ದು, ಶೀಘ್ರಸೊರಗು ರೋಗವನ್ನು ಹತೋಟಿಯಲ್ಲಿಡುತ್ತದೆ.
ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹದ ಬಳಕೆಯಿಂದ ಸಸ್ಯದ ಬೆಳವಣಿಗೆ, ರೋಗ ನಿಯಂತ್ರಣ ಮತ್ತು ಇಳುವರಿ ಅಧಿಕಗೊಳ್ಳುತ್ತದೆ.
ಜೈವಿಕ ಗೊಬ್ಬರವನ್ನು ಬೀಜೋಪಚಾರ, ಮಣ್ಣಿಗೆ, ಕೊಟ್ಟಿಗೆ ಗೊಬ್ಬರ ಮತ್ತು ಬೇವಿನ ಹಿಂಡಿಯ ಜೊತೆ ಮಿಶ್ರಣ ಮಾಡಿ. ರೈತರು ಸುಲಭವಾಗಿ ಬಳಸಬಹುದು.
ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ ಸೂಕ್ಷಾ÷್ಮಣು ಜೀವಿಗಳನ್ನು ಬೇರೆ ಬೇರೆಯಾಗಿ ಹಾಕುವ ಅವಶ್ಯಕತೆ ಇಲ್ಲ. ಇದನ್ನು ರೈತರು ವಿವಿಧ ಬೆಳೆಗಳಿಗೆ ಬಳಸಬಹುದು.
 ಬೀಜವು ಬೇಗ ಮೊಳೆಕೆಯೊಡೆಯುವಂತೆ ಮಾಡಿ, ಸಸ್ಯದ ಬೆಳವಣಿಗೆ ಮತ್ತು ಧೃಡತೆಯನ್ನು ಹೆಚ್ಚಿಸುತ್ತದೆ.
ಶಿಫಾರಸ್ಸು ಮಾಡಿದ ಸಾರಜನಕ ಮತ್ತು ರಂಜಕಯುಕ್ತ ಗೊಬ್ಬರಗಳಲ್ಲಿ ಶೇಕಡ ೨೫ರಷ್ಟು ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಬಳಸುವ ವಿಧಾನ
 ಮಿಶ್ರಣದೊಂದಿಗೆ: ೫ ಕೆ.ಜಿ ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ೫೦೦ ಕೆ.ಜಿ ಕೊಟ್ಟಿಗೆ ಗೊಬ್ಬರ ಅಥವಾ ೨ ಕೆ.ಜಿ ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ೧೦೦ ಕೆ.ಜಿ ಕಹಿಬೇವಿನ ಹಿಂಡಿಯ ಜೊತೆ ಚೆನ್ನಾಗಿ ಮಿಶ್ರಣ ಮಾಡಿ.  ಕಾಳುಮೆಣಸು ಬೆಳೆಗಳಿಗೆ ಉಪಯೋಗಿಸಬೇಕು.
ನೇರವಾಗಿ ಬೆಳೆಗಳಿಗೆ: ೪ ಕೆ.ಜಿ ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹ ಮತ್ತು ಒಂದು ಕೆ.ಜಿ ಬೆಲ್ಲವನ್ನು ೨೦೦ ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ. ಗಿಡದ ಬುಡ ಭಾಗಕ್ಕೆ ನೇರವಾಗಿ (೪ ರಿಂದ ೫ ಲೀಟರ್‌ನಷ್ಟು) ಮೇ-ಜೂನ್, ಆಗಸ್ಟ್ ಮತ್ತು ನೆವೆಂಬರ್ ತಿಂಗಳಿನಲ್ಲಿ ಸುರಿಯಬೇಕು.
ಮಾಹಿತಿಗಾಗಿ ಸಂಪರ್ಕಿಸಿ: ಹಿರಿಯ ವಿಜ್ಞಾನಿ ಮತ್ತು ಮುಖ್ಯಸüರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ದೂರವಾಣಿ: ೦೮೨೭೪-೨೪೭೨೭೪.

No comments:

Post a Comment