Friday 24 September 2021

ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ

ಕೂಡಂಡ ರವಿ, ಹೊದ್ದೂರು.
ಎಲ್ಲರಿಗೂ ಶಿಷ್ಯವೇತನ ಬರುತ್ತಿದೆ, ನಮಗಿಲ್ಲ. ಬಹುತೇಕ ಪೋಷಕರ ಮತ್ತು ವಿದ್ಯಾರ್ಥಿ೵ಗಳ ಕೊರಗು ದೂರವಾಗುತ್ತಿದೆ. ರಾಜ್ಯ ಸರ್ಕಾರ ಹೊಸದಾಗಿ ಜಾರಿಗೊಳಿಸಿರುವ ರೈತ ಮಕ್ಕಳ ಶಿಷ್ಯವೇತನ ಸೌಲಭ್ಯ ಜಾರಿಯಾಗಲಿದೆ. ರೈತ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು “ಶಿಷ್ಯವೇತನ ಯೋಜನೆ ಜಾರಿಗೆ ತರಲಾಗಿದೆ. 10 ನೇ ತರಗತಿ ನಂತರ ರಾಜ್ಯದ ಯಾವುದೇ ಭಾಗದಲ್ಲಿರುವ, ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳವರೆಗೆ ಪ್ರವೇಶ ಪಡೆದಿರುವ ಕರ್ನಾಟಕ ರಾಜ್ಯದ ರೈತರ ಅರ್ಹ ಮಕ್ಕಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಯಾವುದೇ ಮಕ್ಕಳ ಪೋಷಕರು ಕೃಷಿ ಮಾಡುವ ಜಮೀನನ್ನು ಅವರು ಹೊಂದಿರಬೇಕು ಎಂಬ ನಿಯಮವನ್ನು ರೂಪಿಸಲಾಗಿದೆ. ಆದರೆ, ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ್ಯಾಂಕ್ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ಶಿಷ್ಯವೇತನ, ಪ್ರಶಸ್ತಿ, ಪ್ರತಿಫಲ ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ ಈ ಶಿಷ್ಯವೇತನವನ್ನು ಪಡೆಯಲು ಅರ್ಹರು. ರೈತರ ಮಕ್ಕಳ ತಂದೆ- ತಾಯಿ ಇಬ್ಬರೂ ಕೃಷಿ ಜಮೀನಿನ ಒಡೆಯರಾಗಿದ್ದರೆ, ಈ ಯೋಜನೆಯಲ್ಲಿ ಒಂದು ಶಿಷ್ಯ ವೇತನಕ್ಕೆ ಮಾತ್ರ ವಿದ್ಯಾರ್ಥಿಗಳು ಅರ್ಹರು. ಸೆಮಿಸ್ಟರ್ನಲ್ಲಿ, ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿದಲ್ಲಿ ಶಿಷ್ಯವೇತನ ಲಭ್ಯವಾಗುವುದಿಲ್ಲ. ವೇತನಗಳಂತೆ ಇದರಲ್ಲಿಯೂ ಸಹಾ ಮಹಿಳೆಯರಿಗೆ ಅಧಿಕ ಒತ್ತು ನೀಡಲಾಗಿರುವುದೇ ವಿಶೇಷ. ವಿದ್ಯಾಥಿ೵ ವೇತನ ಎಷ್ಟು? ಪದವಿಯ ಮುಂಚೆ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಕೋರ್ಸ ವಿದ್ಯಾರ್ಥಿಗಳಿಗೆ ರೂ.2,500/-, ವಿದ್ಯಾರ್ಥಿನಿಯರಿಗೆ ರೂ.3,000/-, ಬಿ.ಎ, ಬಿ.ಎಸ್ಸಿ, ಬಿ.ಕಾಂ ಇತ್ಯಾದಿ ಎಂ.ಬಿ.ಬಿ.ಎಸ್, ಬಿ.ಇ/, ಬಿ.ಟೆಕ್ ಮತ್ತು ವೃತ್ತಿಪರ ಕೋರ್ಸಗಳನ್ನು ಹೊರತುಪಡಿಸಿ ವಿದ್ಯಾರ್ಥಿಗಳಿಗೆ ರೂ.5,000 ಹಾಗೂ ವಿದ್ಯಾರ್ಥಿನಿಯರಿಗೆ ರೂ.5,500. ಎಲ್.ಎಲ್.ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ರೂ.7,500, ವಿದ್ಯಾರ್ಥಿನಿಯರಿಗೆ ರೂ.8,000, ಎಂ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ರೂ.10,000 ಹಾಗೂ ವಿದ್ಯಾರ್ಥಿನಿಯರಿಗೆ ರೂ. 11,000 ವಾರ್ಷಿಕ ಹಣ ನೀಡಲಾಗುತ್ತದೆ. ನೀವೇನು ಮಾಡಬೇಕು ? ಪ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿಯಾಗದೆ (ಎಫ್ಐಡಿ) ಇರುವಂತಹ ರೈತರು ಪಹಣಿ, ಆಧಾರ ಝರಾಕ್ಸ್, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಕೂಡಲೇ ರೈತ ಸಂಪರ್ಕ ಕೇಂದ್ರಗಳಿಗೆ ನೀಡಿ. ಎಫ್ಐಡಿ ಮಾಡಿಸಿಕೊಂಡು ಈ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಹಾಗೂ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದ

No comments:

Post a Comment